alex Certify BIG NEWS: BSY ವಿರುದ್ಧ ಹೊಸ ಬಾಂಬ್ ಸಿಡಿಸಿದ ಯತ್ನಾಳ್; ನಾನು ಸಿಎಂ ಆಗುವುದನ್ನು ತಪ್ಪಿಸಿ ಬ್ಲಾಕ್ ಮೇಲ್ ಮಾಡಿ ಬೊಮ್ಮಾಯಿ ಸಿಎಂ ಮಾಡಿದ್ರು ಎಂದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BSY ವಿರುದ್ಧ ಹೊಸ ಬಾಂಬ್ ಸಿಡಿಸಿದ ಯತ್ನಾಳ್; ನಾನು ಸಿಎಂ ಆಗುವುದನ್ನು ತಪ್ಪಿಸಿ ಬ್ಲಾಕ್ ಮೇಲ್ ಮಾಡಿ ಬೊಮ್ಮಾಯಿ ಸಿಎಂ ಮಾಡಿದ್ರು ಎಂದ ಶಾಸಕ

ವಿಜಯಪುರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಮುಂದುವರೆಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ ಮಾಡಿದರೆ 3 ತಿಂಗಳಲ್ಲಿ ಸರ್ಕಾರವನ್ನೇ ಬೀಳಿಸುತ್ತೇನೆ ಎಂದು ಕೇಂದ್ರ ನಾಯಕರನ್ನು ಬೆದರಿಸಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಡಿಯೂರಪ್ಪ 10 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದ್ದಾರೆ. ಒಂದು ವೇಳೆ ಯತ್ನಾಳ್ ಸಿಎಂ ಆದರೆ ಯಡಿಯೂರಪ್ಪ ಅವರ ಅಕ್ರಮ, ಭ್ರಷ್ಟಾಚಾರ ಬಯಲಿಗೆ ಬರುತ್ತೆ. ಹಲವರು ಜೈಲು ಸೇರಬೇಕಾಗುತ್ತೆ ಎಂಬ ಭಯ. ಸಿಎಂ ಸಂಭಾವ್ಯರ ಪಟ್ಟಿಯಲ್ಲಿ ನನ್ನೊಬ್ಬನ ಹೆಸರು ಮಾತ್ರ ಇತ್ತು ಹೊರತು ನಿರಾಣಿ, ಬೆಲ್ಲದ್, ಬೊಮ್ಮಾಯಿ ಇವರಾರ ಹೆಸರೂ ಇರಲಿಲ್ಲ. ಆದರೆ ಯಡಿಯೂರಪ್ಪ ನವರು ಧರ್ಮೇಂದ್ರ ಪ್ರಧಾನ್ ಹಾಗೂ ಇನ್ನಿತರ ಕೇಂದ್ರ ನಾಯಕರನ್ನು ಹೆದರಿಸಿ ನಾನು ಸಿಎಂ ಆಗುವುದನ್ನು ತಪ್ಪಿಸಿದರು. ನಾನೇನಾದ್ರೂ ಸಿಎಂ ಆಗಿದ್ರೆ 150 ಸೀಟ್ ಗೆಲ್ಲುತ್ತಿತ್ತು ಎಂದು ಹೇಳಿದ್ದಾರೆ.

BIG NEWS: ಬಿ.ಎಸ್.ವೈ ಭೇಟಿಯಾದ ಬಿ ಎಸ್ ಪಿ ಶಾಸಕ; ಶೀಘ್ರದಲ್ಲಿ ಬಿಜೆಪಿ ಸೇರ್ಪಡೆ ಘೋಷಣೆ ಎಂದ ಎನ್.ಮಹೇಶ್

ಬಿಎಸ್ ವೈ ಈಗ ಪಕ್ಷ ಸಂಘಟನೆಗಾಗಿ ಜಿಲ್ಲಾ ಪ್ರವಾಸ ಮಾಡುವುದಾಗಿ ಹೇಳುತ್ತಿದ್ದಾರೆ. ಇಷ್ಟೆಲ್ಲ ಆದ ಮೇಲೆ ವಿಜಯಪುರ ಜಿಲ್ಲೆಗೆ ಬರಲು ಇವರಿಗೆ ಯಾವ ನೈತಿಕತೆ ಇದೆ? ಇವರ ಜಿಲ್ಲಾ ಪ್ರವಾಸಗಳಿಂದಾಗಿ ಪಕ್ಷಕ್ಕೆ ಇನ್ನಷ್ಟು ಹಾನಿಯಾಗುತ್ತೆ. ಜಿಲ್ಲೆಗೆ ಬಂದರೆ ನಾನೇ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...