alex Certify BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದೆ ‘ನೀತಿ ಸಂಹಿತೆʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದೆ ‘ನೀತಿ ಸಂಹಿತೆʼ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ತಲಾ 14 ಕ್ಷೇತ್ರಗಳಂತೆ ಒಟ್ಟು 28 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಲೋಕಸಭಾ ಚುನಾವಣೆಗೆ ದೇಶದಾದ್ಯಂತ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 16 ರಿಂದ ಚುನಾವಣಾ ನೀತಿ ಸಮಿತಿ ಜಾರಿಯಾಗಿತ್ತು. ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಆ ಬಳಿಕ ಅಂದರೆ ಜೂನ್ 6 ರಂದು ಕೇಂದ್ರ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿರುವ ಘೋಷಣೆಯನ್ನು ಹೊರಡಿಸಲಿದೆ. ಹೀಗಾಗಿ ಅಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಕರ್ನಾಟಕದಲ್ಲಿ ಈಗಾಗಲೇ ಎರಡು ಹಂತದ ಮತದಾನವು ಮುಕ್ತಾಯಗೊಂಡಿರುವುದರಿಂದ ನೀತಿ ಸಂಹಿತೆ ಸಡಿಲಿಕೆ ಮಾಡಬಹುದು. ಇದರಿಂದ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಕೆಲವೊಂದು ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಬಹುದು ಎಂಬ ರಾಜ್ಯ ಸರ್ಕಾರದ ಲೆಕ್ಕಚಾರ ಈಗ ತಲೆಕೆಳಗಾಗಿದೆ.

ಜೂನ್ 6ರ ವರೆಗೂ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಕರ್ನಾಟಕದಲ್ಲೂ ಸಹ ಇದು ಅನ್ವಯವಾಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಒಂದು ತಿಂಗಳ ಕಾಲ ಅಂದರೆ ಜೂನ್ 6 ರ ವರೆಗೆ ಕಾಯಲೆಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...