alex Certify BIG NEWS: ಚುನಾವಣೋತ್ತರ ಸಮೀಕ್ಷೆ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೋತ್ತರ ಸಮೀಕ್ಷೆ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತಗಳ ಮತದಾನ ಪೂರ್ಣಗೊಂಡಿದೆ. ಇಂದು 7ನೇ ಹಂತದ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮಾಧ್ಯಮಗಳು ಇಂದು ಸಂಜೆ 6.30 ರಿಂದ ಮತಗಟ್ಟೆ ಸಮೀಕ್ಷೆಯ ವಿವರಗಳನ್ನು ಪ್ರಸಾರ ಮಾಡಬಹುದಾಗಿದೆ.

ಆದರೆ, ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಪವನ್ ಖೇರಾ ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಮ್ಮ ಪಕ್ಷ ಮತಗಟ್ಟೆ ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ಚರ್ಚೆಯ ಗುರಿ ಸಾರ್ವಜನಿಕರಿಗೆ ಮಾಹಿತಿ ನೀಡುವುದಾಗಿದ್ದು, ಜೂನ್ 4 ರ ಫಲಿತಾಂಶದ ಬಳಿಕ ನಾವು ಚರ್ಚೆಗಳಲ್ಲಿ ಸಂತೋಷದಿಂದ ಭಾಗವಹಿಸುತ್ತೇವೆ ಎಂದು ತಿಳಿಸಿರುವ ಅವರು, ಈ ತೀರ್ಮಾನವನ್ನು ಪಕ್ಷದೊಳಗೆ ಆಂತರಿಕವಾಗಿ ಚರ್ಚಿಸಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Voters have cast their votes and their verdict has been secured.

The results will be out on 4th June. Prior to that, we do not see any reason to indulge in speculation and slugfest for TRP.

The Indian National…

— Pawan Khera 🇮🇳 (@Pawankhera) May 31, 2024

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...