ಬೆಂಗಳೂರು : ರಾಜ್ಯದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎಂಬಂತೆ ಈ ತಿಂಗಳು ಒಟ್ಟಿಗೆ 2 ತಿಂಗಳ ಅಕ್ಕಿ ವಿತರಣೆಯಾಗಲಿದೆ.
ಹೌದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಭ್ರವರಿ ಮತ್ತು ಮಾರ್ಚ್ ತಿಂಗಳಿನದು ಸೇರಿಸಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಫುಡ್ ಕಾರ್ಪೊರೇಷನ್ ಅಕ್ಕಿ ಕೊಡಲಿಲ್ಲ. ಇದೀಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು. ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ಗಳನ್ನು ಪರೀಕ್ಷರಣೆ ಮಾಡಲಾಗಿದ್ದು, ಆ ಪೈಕಿ 1.65 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ಗೆ ಸೇರಿಸಲಾಗಿದೆ ಎಂದರು.