alex Certify BIG NEWS : B.Y ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಒದಗಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : B.Y ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಒದಗಿಸಿದ ಸರ್ಕಾರ

ನ.15ರಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ ಸ್ವೀಕರಿಸಲಿದ್ದಾರೆ . ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇದರ ನಡುವೆ ಸರ್ಕಾರ ಬಿ.ವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ನೀಡಿದೆ. ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ. ಪದಗ್ರಹಣಕ್ಕೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 15 ರಂದೇ ಕಾರ್ಯಕ್ರಮ ಫೈನಲ್ ಆಗಿದೆ.

ಇಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿಯಾಗಿ ಚರ್ಚೆ ನಡೆಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...