alex Certify BIG NEWS: JDS ನಿಂದ ಅವಕಾಶವಾದಿ ರಾಜಕಾರಣ; HDK ಆರೋಪಕ್ಕೆ ತಿರುಗೇಟು ನೀಡಿದ ಸಲೀಂ ಅಹ್ಮದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDS ನಿಂದ ಅವಕಾಶವಾದಿ ರಾಜಕಾರಣ; HDK ಆರೋಪಕ್ಕೆ ತಿರುಗೇಟು ನೀಡಿದ ಸಲೀಂ ಅಹ್ಮದ್

ಹಾವೇರಿ: ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗುತ್ತಿದೆ, ಸ್ವಪಕ್ಷದ ಮುಸ್ಲೀಂ ನಾಯಕರನ್ನೇ ಸಿದ್ದರಾಮಯ್ಯ ಮುಗಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್, ಜೆಡಿಎಸ್ ನಿಂದ ಅವಕಾಶವಾದಿ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಾತನಾಡಿದ ಸಲೀಂ ಅಹ್ಮದ್, ಕುಮಾರಸ್ವಾಮಿಯವರು ಯಾವ ಅರ್ಥದಲ್ಲಿ ಆರೋಪ ಮಾಡುತ್ತಿದ್ದಾರೆ ಗೊತ್ತಿಲ್ಲ. ಆದರೆ ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನಿಂದ ಯಾವುದೇ ಅಲ್ಪಸಂಖ್ಯಾತ ನಾಯಕರಿಗೂ ಅನ್ಯಾಯವಾಗಿಲ್ಲ ಎಂದರು.

BIG NEWS: ಬಾಂಗ್ಲಾದೇಶದಲ್ಲಿ ದಸರಾ ಆಚರಣೆ ವೇಳೆ ಇಸ್ಕಾನ್ ದೇವಸ್ಥಾನ, ಭಕ್ತರ ಮೇಲೆ ಹಿಂಸಾತ್ಮಕ ದಾಳಿ

ಮತ ವಿಭಜಿಸಲು ಬಸವಕಲ್ಯಾಣದಲ್ಲೂ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದರು, ಈಗ ಉಪಚುನಾವಣೆಯಲ್ಲಿಯೂ ಅದೇ ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಗುಡುಗಿದರು.

ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿಲ್ಲ, ಕಡೆಗಣಿಸುವುದೂ ಇಲ್ಲ. ಪಕ್ಷದ ಸಿದ್ಧಾಂತ, ಶಿಸ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದರೆ ಅಂತವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...