alex Certify BIG NEWS: JDS ಮುಖಂಡನ ಪುತ್ರ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDS ಮುಖಂಡನ ಪುತ್ರ ಆತ್ಮಹತ್ಯೆಗೆ ಶರಣು

ಮೈಸೂರು: ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮರಟಿಕ್ಯಾತನಹಳ್ಳಿಯಲ್ಲಿ ನಡೆದಿದೆ.

ಇಲ್ಲಿನ ಅಪಾರ್ಟ್ ಮೆಂಟ್ ನಲ್ಲಿಯೇ ಪ್ರದೀಪ್ (32) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಜೆಡಿಎಸ್ ಮುಖಂಡರಾಗಿರುವ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿಯಾಗಿದ್ದರೆ, ಅವರ ಪತ್ನಿ, ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಇದೀಗ ಮಗ ಏಕಾಏಕಿ ಅಪಾರ್ಟ್ ಮೆಂಟ್ ನ ಮನೆಯಲ್ಲಿ ನೇಣಿಗೆ ಶರಣಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...