alex Certify BIG NEWS : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಹಾಗೂ ದತ್ತಿನಿಧಿ ಪುಸ್ತಕ ಪುರಸ್ಕಾರ ಪ್ರಕಟ, ಹೀಗಿದೆ ವಿಜೇತರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಹಾಗೂ ದತ್ತಿನಿಧಿ ಪುಸ್ತಕ ಪುರಸ್ಕಾರ ಪ್ರಕಟ, ಹೀಗಿದೆ ವಿಜೇತರ ಪಟ್ಟಿ

ಬೆಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2022ನೇ ಹಾಗೂ 2023ನೇ ಸಾಲಿನ ಪುಸ್ತಕ ಪ್ರಶಸ್ತಿ ಹಾಗೂ ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟಗೊಂಡಿದೆ. ನಾಲ್ವರು ಲೇಖಕರಿಗೆ ವಾರ್ಷಿಕ ಪುಸ್ತಕ ಬಹುಮಾನ ಹಾಗೂ 6 ಲೇಖಕರಿಗೆ ವಾರ್ಷಿಕ ದತ್ತಿ ನಿಧಿ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ.

2022ನೇ ಸಾಲಿನ ತುಳು ಕವನ ವಿಭಾಗದ ಪುಸ್ತಕ ಬಹುಮಾನಕ್ಕೆ ರಾಜೇಶ್ ಶೆಟ್ಟಿ ದೋಟ ಅವರ ‘ಮುಗದಾರಗೆ’ ಕವನ ಸಂಕಲನ, 2023ನೇ ಸಾಲಿನ ತುಳು ಕವನ ವಿಭಾಗಕ್ಕೆ ರಘು ಇಡ್ಕಿದು ಅವರ ‘ಎನ್ನ ನಲಿಕೆ’ ಕವನ ಸಂಕಲನ, 2023ನೇ ಸಾಲಿನ ತುಳು ಕಾದಂಬರಿ ಬಹುಮಾನಕ್ಕೆ ರಾಜಶ್ರೀ ಟಿ. ರೈ ಪೆರ್ಲ ಅವರ ‘ಮುಸ್ರಾಲೋ ಪಟ್ರೊ’ ಕಾದಂಬರಿ, 2023ನೇ ಸಾಲಿನ ತುಳು ಅನುವಾದ ವಿಭಾಗದ ಪುಸ್ತಕ ಬಹುಮಾನಕ್ಕೆ ಕುಶಲಾಕ್ಷಿ ವಿ. ಕುಲಾಲ್ ಅವರ ‘ತಗೊರಿ ಮಿತ್ತ್ದ ಮಣ್ಣ್ ‘ ಅನುವಾದ ಕೃತಿ ಆಯ್ಕೆಯಾಗಿದೆ. ಈ ಪುಸ್ತಕ ಪ್ರಶಸ್ತಿಯು ₹25 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

2022ನೇ ಸಾಲಿನ ಉಷಾ ಪಿ. ರೈ ದತ್ತಿ ನಿಧಿ ಪ್ರಶಸ್ತಿಗೆ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರ ‘ತುಳು ಕಾವ್ಯ ಮೀಮಾಂಸೆ’ ಕೃತಿ, 2023ನೇ ಪ್ರಶಸ್ತಿಗೆ ಚಿನ್ನಪ್ಪ ಗೌಡ ಅವರ ‘ಕರಾವಳಿ ಕಥನ’ ಕೃತಿ, 2022ನೇ ಸಾಲಿನ ದಿ. ಕೆ. ಅಮರನಾಥ ಶೆಟ್ಟಿ ದತ್ತಿ ಪ್ರಶಸ್ತಿಗೆ ಯಶೋದಾ ಮೋಹನ್ ಅವರ ‘ದೇರ ಮಾಮುನ ದೂರ ನೋಟೊಲು’ ಕೃತಿ, 2023ನೇ ಸಾಲಿನ ಪ್ರಶಸ್ತಿಗೆ ವಿ.ಕೆ. ಯಾದವ್ ಅವರ ‘ಮೊಗವೀರೆರ್ನ ಸಾಂಸ್ಕೃತಿಕ ಬದ್ಕ್ ಬೊಕ್ಕ ಆರ್ಥಿಕ ಚಿಂತನೆ’ ಕೃತಿಯು ಆಯ್ಕೆಯಾಗಿದೆ. 2022ನೇ ಸಾಲಿನ ದಿ. ಶಿವಾನಂದ ಕರ್ಕೇರ ದತ್ತಿನಿಧಿ ಪ್ರಶಸ್ತಿಗೆ ಶಾರದಾ ಅಂಚನ್ ಅವರ ‘ನಂಬಿ ಸತ್ಕಲು’ ಕೃತಿ, 2023ನೇ ಸಾಲಿನ ಪ್ರಶಸ್ತಿಗೆ ರಘುನಾಥ ವರ್ಕಾಡಿ ಅವರ ‘ಸೂರ್ಯ ಚಂದ್ರ ಸಿರಿ’ ಕೃತಿ ಆಯ್ಕೆಯಾಗಿದೆ. ಈ ದತ್ತಿನಿಧಿ ಪ್ರಶಸ್ತಿಗಳು ₹10 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿವೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...