ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಎಲ್ಲಾ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಸೇರಿದಂತೆ ಎಲ್ಲಾ 20 ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಆ.7ರಂದು ಗೋಕಾಕ್ ನ ಜಿ ಎಸ್ ಎಸ್ ಪರೀಕ್ಷಾ ಕೇಂದ್ರದಲ್ಲಿ ಕೆ ಪಿ ಟಿ ಸಿ ಎಲ್ ಪರೀಕ್ಷೆ ನಡೆದಿತ್ತು. ಆ.10ರಂದು ಪರೀಕ್ಷಾ ಅಕ್ರಮ ಸಂಬಂಧ ಸಿದ್ದಪ್ಪ ಮದಿಹಳ್ಳಿ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದ. ಪ್ರಮುಖ ಆರೋಪಿ ಸಂಜು ಭಂಡಾರಿ ಸೇರಿ ಅಕ್ರಮದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ಗೋಕಾಕ್ ಪೊಲೀಸರು ಬಂಧಿಸಿದ್ದರು.