alex Certify BIG NEWS: KSRTC ಬಸ್ ಚಾಲಕ ಆತ್ಮಹತ್ಯೆ ಯತ್ನ ಕೇಸ್; ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬುಲೆನ್ಸ್ ತಡೆದ ಮಾಜಿ ಶಾಸಕ? ಮತ್ತೊಂದು ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್ ಚಾಲಕ ಆತ್ಮಹತ್ಯೆ ಯತ್ನ ಕೇಸ್; ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬುಲೆನ್ಸ್ ತಡೆದ ಮಾಜಿ ಶಾಸಕ? ಮತ್ತೊಂದು ಗಂಭೀರ ಆರೋಪ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಬಸ್ ಚಾಲಕ ಜಗದೀಶ್ ನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾಜಿ ಶಾಸಕರು ಆಂಬುಲೆನ್ಸ್ ತಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಸ್ ಚಾಲಕ ಜಗದೀಶ್ ನನ್ನು ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ, ಆಂಬುಲೆನ್ಸ್ ತಡೆದಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಜಗದೀಶ್ ನನ್ನು ಬಿಜಿಎಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಈ ಕುರಿತ ಸಿಸಿಟಿವಿ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಮಾಜಿ ಶಾಸಕ ಸುರೇಶ್ ಗೌಡ, ತಾನು ಆಂಬುಲೆನ್ಸ್ ತಡೆದಿಲ್ಲ ಎಂದು ಹೇಳುವ ಮೂಲಕ ಆರೋಪ ನಿರಾಕರಿಸಿದ್ದಾರೆ. ನಾನು ಆಂಬುಲೆನ್ಸ್ ತಡೆದಿಲ್ಲ, ಬಸ್ ಚಾಲಕನ ಆರೋಗ್ಯ ವಿಚಾರಿಸಿ ಕೂಡಲೇ ಕಳಿಸಿದ್ದೇನೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Forskellen mellem de to katte: Kun et geni kunne svare Tre overraskende produkter Et synstestspil: Kan du finde Opskriftshemmeligheder afsløres: Erstatningsmuligheder for salatprodukter "Kun 1 % af