alex Certify BIG NEWS: MES ವಿರುದ್ಧ ಸಿಡಿದೆದ್ದ ಕನ್ನಡಿಗರು; ಕರವೇ ಕಾರ್ಯಕರ್ತರಿಂದ ಆನಗೋಳ ಚಲೋ; ಪೀರನವಾಡಿಯಲ್ಲಿ ಬೃಹತ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: MES ವಿರುದ್ಧ ಸಿಡಿದೆದ್ದ ಕನ್ನಡಿಗರು; ಕರವೇ ಕಾರ್ಯಕರ್ತರಿಂದ ಆನಗೋಳ ಚಲೋ; ಪೀರನವಾಡಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಖಂಡಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ನಿಷೇಧಾಜ್ಞೆ ನಡುವೆಯೂ ಆನಗೋಳ ಚಲೋ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೀರನವಾಡಿ ತಲುಪಿದ್ದು, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಎಂಇಎಸ್ ಪುಂಡರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಬಾನೆಟ್ ಮೇಲೆ ಪೇದೆ ಕುಳಿತರೂ ಕಾರು ನಿಲ್ಲಿಸದ ಚಾಲಕ…!

ಕರವೇ ಕಾರ್ಯಕರ್ತರನ್ನು ಪೀರನವಾಡಿ ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ-ಘರ್ಷಣೆ ನಡೆದಿದೆ. ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವ ಬದಲು ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಪೊಲೀಸರ ವಿರುದ್ಧ ಹೋರಾಟಗಾರರು ವಾಗ್ವಾದಕ್ಕಿಳಿದಿದ್ದಾರೆ.

ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಳ್ಳುವ ಸಾಧ್ಯತೆ ಬೆನ್ನಲ್ಲೇ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...