ರಾಮನಗರ : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಹೈಡ್ರಾಮಾ ನಡೆಸಿದ ಘಟನೆ ಇಂದು ನಡೆದಿದೆ.
ಸಂಸದ ಡಿ.ಕೆ ಸುರೇಶ್ ಶಾಸಕ ಇಕ್ಮಾಲ್ ಅವರು ತೆರಳುತಿದ್ದ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ರಾಮನಗರ ಡಿಸಿ ಕಚೇರಿಯಿಂದ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.