alex Certify BIG NEWS: NIA ದಾಳಿ ಗೆ ಖಂಡನೆ; ಹಿಂಸಾಚಾರಕ್ಕೆ ತಿರುಗಿದ PFI ಸಂಘಟನೆ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: NIA ದಾಳಿ ಗೆ ಖಂಡನೆ; ಹಿಂಸಾಚಾರಕ್ಕೆ ತಿರುಗಿದ PFI ಸಂಘಟನೆ ಪ್ರತಿಭಟನೆ

ತಿರುವನಂತಪುರಂ: ಎನ್ ಐಎ ದಾಳಿ ಖಂಡಿಸಿ ಕೇರಳದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪಿ ಎಫ್ ಐ ಸಂಘಟನೆ ಕಾರ್ಯಕರ್ತರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳದ ಕೊಲ್ಲಂನಲ್ಲಿ ಪಿಎಫ್ ಐ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಬಸ್ ಗಳ ಮೇಲೆ, ಸಿಕ್ಕಸಿಕ್ಕ ವಾಹನಗಳ ಮೇಲೆ ಪಿ ಎಫ್ ಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಝಿಕ್ಕೋಡ್, ಕೊಚ್ಚಿ, ಆಲಪ್ಪುಳ, ಕೊಲ್ಲಂ ಹಾಗೂ ವಯನಾಡಿನಲ್ಲಿ ಪಿ ಎಫ್ ಐ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಕೆ ಎಸ್ ಆರ‍್ ಟಿ  ಸಿ ಬಸ್, ಲಾರಿ ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಕೂಡ ಗಾಯಗೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...