alex Certify BIG NEWS: PFI ಸಂಘಟನೆ ಮೇಲೆ ದಾಳಿ; ಸರ್ಕಾರದಿಂದ ಒಂದು ಗಟ್ಟಿ ನಿರ್ಧಾರ; BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PFI ಸಂಘಟನೆ ಮೇಲೆ ದಾಳಿ; ಸರ್ಕಾರದಿಂದ ಒಂದು ಗಟ್ಟಿ ನಿರ್ಧಾರ; BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಹಿತಿ

ವಿಜಯಪುರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಿ ಎಫ್ ಐ ಸಂಘಟನೆ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ 70ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮ ಸರ್ಕಾರ ಗಟ್ಟಿ ನಿರ್ಧಾರಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ ಪಿ ಎಫ್ ಐ ಮುಖಂಡರ ಮೇಲೆ ಎನ್ ಐ ಎ ದಾಳಿ ಹಾಗೂ ಇಂದು ರಾಜ್ಯದಲ್ಲಿ ನಡೆದಿರುವ ಪೊಲೀಸರ ದಾಳಿ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಎನ್ ಐ ಎ ದಾಳಿ ವೇಳೆ ನಮ್ಮ ರಾಜ್ಯದಲ್ಲಿಯೇ ಅತಿ ಹೆಚ್ಚು ಪಿ ಎಫ್ ಐ ಮುಖಂಡರನ್ನು ಬಂಧಿಸಲಾಗಿದೆ. ಪಿ ಎಫ್ ಐ ಸಂಘಟನೆ ನಿಷೇಧಕ್ಕೆ ದೇಶಭಕ್ತರ ಸಂಘಟನೆ ಬೇಡಿಕೆ ಇಟ್ಟಿತ್ತು. ಸಂಘಟನೆ ನಿಷೇಧ ನಿಟ್ಟಿನಲ್ಲಿ ಹಲವು ಸಾಕ್ಷಾಧಾರಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ ಎಂದರು.

ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಸಂಘಟನೆ ವಿರುದ್ಧ ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...