alex Certify BIG NEWS: PFI ಹಳ್ಳಿ ಹಳ್ಳಿಯಲ್ಲಿ ಕ್ಯಾನ್ಸರ್ ನಂತೆ ಹಬ್ಬಿದೆ; ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PFI ಹಳ್ಳಿ ಹಳ್ಳಿಯಲ್ಲಿ ಕ್ಯಾನ್ಸರ್ ನಂತೆ ಹಬ್ಬಿದೆ; ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ

ಹುಬ್ಬಳ್ಳಿ: ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 70ಕ್ಕೂ ಹೆಚ್ಚು ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಈ ನಡುವೆ ಪಿ ಎಫ್ ಐ ಸಂಘಟನೆ ವಿರುದ್ಧ ಕಿಡಿಕಾರಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಪಿ ಎಫ್ ಐ ಸಂಘಟನೆ ಕ್ಯಾನ್ಸರ್ ನಂತೆ ಹಬ್ಬಿದೆ. ದೇಶದ್ರೋಹಿ ಕೆಲಸದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಪೊಲೀಸರು ಎರಡನೇ ಬಾರಿ ದಾಳಿ ನಡೆಸಿದ್ದಾರೆ.

ಪಿ ಎಫ್ ಐ , ಎಸ್ ಡಿ ಪಿ ಐ ಸಂಘಟನೆಗಳು ಆರ್ ಎಸ್ ಎಸ್ ಟಾರ್ಗೆಟ್ ಮಾಡಿದ್ದರು. ಆರ್ ಎಸ್ ಎಸ್ ನಾಯಕರ ಕಾರಿನ ಮೇಲೆ ಜಿಹಾದಿ ಬರಹ ಬರೆದು ಬೆದರಿಕೆ ಹಾಕಿದ್ದರು. ಶಾಂತಿ ಸುವ್ಯವಸ್ಥೆಗೆ ದಕ್ಕೆಯುಂಟು ಮಾಡುತ್ತಾರೆ ಎಂಬ ಕಾರಣಕ್ಕೆ ಪಿ ಎಫ್ ಐ ಮುಖಂಡರನ್ನು ಬಂಧಿಸಲಾಗಿದೆ. ಈ ಸಂಘಟನೆಗಳ ಬಗ್ಗೆ ವಿಸ್ತಾರವಾಗಿ ತನಿಖೆಯಾಗಬೇಕು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...