ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.
ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದ್ದರು.
ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ, ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಮಾಡಲಾಗಿದೆ.ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ನ ಮುಂದಿಡಲು ಸಿಎಂ ಚಿಂತನೆ ಮಾಡಿದ್ದಾರೆ. ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲಿದ್ದಾರೆ.
ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು. ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದ್ದರು.