alex Certify BIG NEWS: RSS ಚಡ್ಡಿ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶವಾಗುತ್ತೆ; ಸಚಿವ ಭೈರತಿ ಬಸವರಾಜ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: RSS ಚಡ್ಡಿ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶವಾಗುತ್ತೆ; ಸಚಿವ ಭೈರತಿ ಬಸವರಾಜ್ ಆಕ್ರೋಶ

ಬೆಂಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದದ್ರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಆರ್.ಎಸ್.ಎಸ್ ವಿಚಾರಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಸಚಿವ ಭೈರತಿ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರ್.ಎಸ್.ಎಸ್ ಚಡ್ಡಿ ಸುಟ್ಟರೆ ನಾವೇನು ಸುಮ್ಮನೆ ಕೂರುವುದಿಲ್ಲ, ಆರ್.ಎಸ್.ಎಸ್ ಚಡ್ಡಿ ಬಗ್ಗೆ ಮಾತನಾಡುದ ಸಿದ್ದರಾಮಯ್ಯನವರಿಗೆ ಬುದ್ಧಿ ಭ್ರಮಣೆಯಾಗಿದೆ. ವಿಪಕ್ಷ ನಾಯಕರಾಗಿ, ಮಾಜಿ ಸಿಎಂ ಆಗಿ ರಾಷ್ಟ್ರಭಕ್ತಿಗೆ ಹೆಸರಾಗಿರುವ ಸಂಸ್ಥೆ ಬಗ್ಗೆ ಈ ರೀತಿ ಮಾತುಗಳನ್ನು ಆಡುವುದು ಶೋಭೆತರಲ್ಲ ಎಂದು ವಾಗ್ದಾಳಿ ನಡೆಸಿದರು.

ಆರ್.ಎಸ್.ಎಸ್ ಚಡ್ಡಿ ವಿಷಯಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶವಾಗಲಿದೆ. ದೇಶ ಕಟ್ಟುವ ಕೆಲಸ ಮಾಡುತ್ತಿರುವ ಸಂಸ್ಥೆ ಆರ್.ಎಸ್.ಎಸ್. ದೇಶ ಭಕ್ತಿ ಸಂಸ್ಕೃತಿ ಬಗ್ಗೆ ಹೇಳಿಕೊಡುವ, ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆಯನ್ನು ಈ ರೀತಿ ಅವಹೇಳನ ಮಾಡುವುದು ವಿಪಕ್ಷ ನಾಯಕರಿಗೆ ಗೌರವವಲ್ಲ. ಸಿದ್ದರಾಮಯ್ಯನವರಿಗೆ ಬುದ್ಧಿ ಇಲ್ಲ ಎಂದೇ ಹೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...