alex Certify BIG NEWS : 2022 ರಲ್ಲೇ ‘ಹುಲಿ ಚರ್ಮ’ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : 2022 ರಲ್ಲೇ ‘ಹುಲಿ ಚರ್ಮ’ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

ಬೆಂಗಳೂರು : 2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎಂದು ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ನೀಡಲಾಗಿದೆ.

ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಈ ಹಿನ್ನೆಲೆ ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ನೀಡಲಾಗಿದ್ದು, 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಹುಲಿ ಚರ್ಮವನ್ನು ಉಡುಗೊರೆ ಯಾಗಿ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು ಎಂದು ಸ್ಪಷ್ಟನೆ ನೀಡಲಾಗಿದೆ.
ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಇದಲ್ಲದೇ ಹುಲಿ ಉಗುರು ಧರಿಸಿದ ನಟ ದರ್ಶನ್, ಜಗ್ಗೇಶ್ ವಿರುದ್ಧ ಕೂಡ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...