![](https://kannadadunia.com/wp-content/uploads/2024/01/E-Office.jpg)
ಬೆಂಗಳೂರು : ಕಂದಾಯ ಇಲಾಖೆಯ ಎಲ್ಲ ಹಂತದ ಕಚೇರಿಗಳಲ್ಲಿ ಫೆಬ್ರವರಿ 1 ರಿಂದ ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕಂದಾಯ ಇಲಾಖೆಯ ಎಲ್ಲ ಹಂತದ ಕಚೇರಿಗಳಲ್ಲಿ ಫೆಬ್ರವರಿ 1 ರಿಂದ ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು. ಭೌತಿಕ ಕಡತಗಳ ನಿರ್ವಹಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು. ಟಪಾಲುಗಳ ಸ್ವೀಕಾರ ಮತ್ತು ಮುಂದಿನ ಪ್ರಕ್ರಿಯೆಯೂ ಇ-ಆಫೀಸ್ ಮೂಲಕವೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇ- ಆಫೀಸ್ ತಂತ್ರಾಂಶ ಬಳಕೆ ಮಾಡದೇ, ಭೌತಿಕ ಕಡತಗಳನ್ನು ತೆರೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇ- ಆಫೀಸ್ ತಂತ್ರಾಂಶ ಕುರಿತು ನಿಯಮಿತವಾಗಿ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಭೌತಿಕ ಕಡತ ನಿರ್ವಹಣೆ ಮಾಡಿದವರಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.