alex Certify BIG NEWS : ರಾಜ್ಯದ ಹಲವೆಡೆ ವರುಣನ ಆರ್ಭಟ ; ಸಿಡಿಲು ಬಡಿದು ಮೂವರು ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಹಲವೆಡೆ ವರುಣನ ಆರ್ಭಟ ; ಸಿಡಿಲು ಬಡಿದು ಮೂವರು ಸಾವು..!

ಬೆಂಗಳೂರು : ರಾಜ್ಯದಲ್ಲಿ ಬಿರು ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ನಿನ್ನೆ ವರುಣನ ಆರ್ಭಟ ಜೋರಾಗಿತ್ತು.

ಶಿವಮೊಗ್ಗ , ಮಡಿಕೇರಿ ಚಿಕ್ಕಮಗಳೂರು , ವಿಜಯಪುರ , ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಭರ್ಜರಿ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಗಾಳಿ , ಗುಡುಗು ಸಹಿತ ಮಳೆಯಾಗಿದೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್ಆರ್ಪುರ, ಆವುತಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ.

ಸಿಡಿಲಿಗೆ ಮೂವರು ಬಲಿ

ವಿಜಯಪುರದಲ್ಲಿ ಸಿಡಿಲಿನ ಜೊತೆ ಭಾರಿ ಮಳೆಯಾಗಿದೆ. ಇಂಡಿ ತಾಲೂಕಿನಲ್ಲಿ 9 ನೇ ತರಗತಿ ವಿದ್ಯಾರ್ಥಿ ಬೀರಪ್ಪ, ಮಸಳಿ ಬಿ ಕೆ ಗ್ರಾಮದಲ್ಲಿ ಸೋಮಶೇಖರ ಕಾಶಿನಾಥ ಪಟ್ಟಣಶೆಟ್ಟಿ (45) ಹಾಗೂ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಸುನಂದಾ ಶ್ರೀಮಂತ ಡೊಳ್ಳಿ (50) ಎಂಬುವವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...