alex Certify BIG NEWS: VHP ಕಾರ್ಯಕರ್ತನ ಹತ್ಯೆಗೆ ಸಂಚು ವಿಚಾರ; ಮಂಗಳೂರು ಕಮೀಷನರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: VHP ಕಾರ್ಯಕರ್ತನ ಹತ್ಯೆಗೆ ಸಂಚು ವಿಚಾರ; ಮಂಗಳೂರು ಕಮೀಷನರ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿ ವಿ‌ ಹೆಚ್ ಪಿ ಕಾರ್ಯಕರ್ತನ ಹತ್ಯೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಇದು ಸತ್ಯಕ್ಕೆ ದೂರವಾದ ವಿಚಾರ, ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ವ್ಯಕ್ತಿಯೋರ್ವರು ತಮಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಹತ್ಯೆಗೆ ಸಂಚು ರೂಪಿಸಿದ್ದಾಗಿ ಹಾಗೂ ಬೈಕ್ ನಲ್ಲಿ ಅಪರಿಚಿತರು ತಮ್ಮನ್ನು ಹಿಂಬಾಲಿಸುತ್ತಿರುವುದಾಗಿ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತನಗೆ ಇಂಟರ್ ನೆಟ್ ಮೂಲಕ ಕಾಲ್ ಮಾಡಿ ಬೆದರಿಕೆ ಹಾಕುತ್ತಿರುವುದಾಗಿಯೂ ತಿಳಿಸಿದ್ದರು. ಹಾಗಾಗಿ ದೂರುದಾರನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಪರಿಶೀಲಿಸಿದಾಗ ವ್ಯಕ್ತಿಗೆ ಇಂಟರ್ ನೆಟ್ ನಿಂದ ಕಾಲ್ ಬಂದಿರುವುದು ನಿಜ, ಆದರೆ ಬೈಕ್ ನಲ್ಲಿ ಬಂದಿದ್ದು ಫುಡ್ ಡೆಲಿವರಿ ಬಾಯ್. ದೂರುದಾರರ ಪಕ್ಕದ ಮನೆಗೆ ಫುಡ್ ಡೆಲಿವರಿ ಹುಡುಗ ಬಂದಿದ್ದ. ಸಿಸಿ ಟಿವಿಯಲ್ಲಿ ಫುಡ್ ಡೆಲಿವರಿ ಹುಡುಗ ಬಂದಿದ್ದು ಸೆರೆಯಾಗಿದೆ. ಫುಡ್ ಡೆಲಿವರಿ ಬಾಯ್ ಬಂದಿದ್ದನ್ನು ಅಪಪ್ರಚಾರ ಮಾಡಲಾಗಿದೆ. ಬೈಕ್ ನಲ್ಲಿ ಬಂದು ಹತ್ಯೆಗೆ ಸಂಚು ಎಂದು ಅನಗತ್ಯವಾಗಿ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ ಅಂತಹ ಯಾವುದೇ ಸಂಚು ನಡೆದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...