alex Certify BIG NEWS : ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಬಿಗಿ ಪಟ್ಟು ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಧಾರವಾಡ ಸುದ್ದಿಗಾರರ ಜೊತೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ. ಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ. ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ. ಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆ ಈಗ ಏನಾಯ್ತು? ಬಿಲ್ಲಿನ ದಾರ ಕಟ್ ಮಾಡಿಸಿದರು. ಸಿದ್ದರಾಮಯ್ಯ ಅವರ ಪತ್ನಿ ಒಮ್ಮೆಯೋ ಸಾರ್ವಜನಿಕವಾಗಿ ಹೊರಗೆ ಬಂದಿಲ್ಲ. ಪಾವಿತ್ರ್ಯತೆ ಇರುವ ಹೆಣ್ಣು ಮಗಳ ಬಗ್ಗೆ ಎಲ್ಲಾ ಕಡೆ ಮಾತನಾಡಿಕೊಳ್ಳುವಂತೆ ಮಾಡಿದ್ದಾರೆ ಎಂದರು.

ತಿರುಪತಿಯಲ್ಲಿ ವೆಂಕಟೇಶ್ವರನ ಸನ್ನಿದಿಯಲ್ಲಿ ಏನಾಯ್ತು ..? ಕೃಷ್ಣ ಇಲ್ಲದಕ್ಕೆ ದುರ್ಯೋಧನ ಗೆದ್ದ. ನೀವು ಧರ್ಮಶಾಸ್ತ್ರದ ಪ್ರಕಾರ ಸ್ಥಳ ಸ್ವಚ್ಛ ಮಾಡಿದ್ದೀರಿ, ಆದರೆ ನಾಲ್ಕು ವರ್ಷ ಅದನ್ನು ತಿಂದವರನ್ನು ಏನು ಮಾಡ್ತೀರಿ, ಇದಕ್ಕೆ ಸರ್ಕಾರವೇ ಉತ್ತರ ಕೊಡಬೇಕಿದೆ ಎಂದು ಶ್ರೀಗಳು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...