alex Certify ಬೆಂಗಳೂರು `ಟ್ರಾಫಿಕ್’ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು `ಟ್ರಾಫಿಕ್’ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ !

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಹೊಸ ಪ್ಲಾನ್ ಮಾಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಇರುವ ರಸ್ತೆಗಳನ್ನು ಸುರಂಗ ಮಾರ್ಗದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂ.ವೆಚ್ಚ ಮಾಡಲು ನಿರ್ಧರಿಸಿದೆ. 2 ಹಂತದಲ್ಲಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ ಮಾಡಲು ಸರ್ಕಾರ ಪ್ಲಾನ್ ಮಾಡುತ್ತಿದ್ದು, ಈ ಸಂಬಂಧ ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳಗೊಂಡ ಒಂದು ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...