ಬೆಂಗಳೂರು : ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರತಿ ಕ್ವಿಂಟಾಲ್ ಗೆ 2 ಸಾವಿರ ರೂ. ಕುಸಿತವಾಗಿದೆ.
ಭೂತಾನ್ನಿಂದ 17 ಸಾವಿರ ಟನ್ ಅಡಕೆ ಆಮದು ಹಿನ್ನೆಲೆಯಲ್ಲಿ ಪ್ರತಿ ಕ್ವಿಂಟಾಲ್ ಅಡಿಕೆ ದರ ಎರಡು ಸಾವಿರ ರೂ.ಗೆ ಕುಸಿತವಾಗಿದೆ. ಇದರಿಂದ ಅಡಿಕೆ ಬೆಳೆಗಾರರಲ್ಲಿ ಮತ್ತೆ ಆತಂಕ ಶುರುವಾಗಿದೆ. ಅದರಲ್ಲೂ ಹೆಚ್ಚಾಗಿ ಅಡಕೆ ಬೆಳೆಯುವ ಚನ್ನಗಿರಿ ತಾಲೂಕಿನ ಅಡಕೆ ಬೆಳೆಗಾರರಿಗೆ ಆತಂಕ ಶುರುವಾಗಿದ್ದು, ಅಡಿಕೆ ದರ ಕಡಿಮೆಯಾಗುವ ಹಿನ್ನೆಲೆ ಬೇಗನೇ ಕೊಯ್ಲು ಶುರು ಮಾಡಿದ್ದಾರೆ.
ರಾಜ್ಯದ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭಾರೀ ಕುಸಿತ ಕಂಡಿದೆ. ಇತ್ತೀಚೆಗಷ್ಟೇ 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಕುಸಿತ ಕಂಡಿದೆ. ಸದ್ಯ, ರಾಶಿ ಅಡಿಕೆ ಗರಿಷ್ಟ 53,900 ರೂ. . ಇದೆ. ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿದ್ದು, ಒಂದೊಂದು ಕಡೆ ಒಂದೊಂದು ಬೆಲೆ ಇದೆ.