alex Certify BREAKING : ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ : ಬೆಂಗಳೂರಿನ ಹಲವೆಡೆ ‘CCB’ ದಾಳಿ, ಹಣ- ಚಿನ್ನಾಭರಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ : ಬೆಂಗಳೂರಿನ ಹಲವೆಡೆ ‘CCB’ ದಾಳಿ, ಹಣ- ಚಿನ್ನಾಭರಣ ಜಪ್ತಿ

ಬೆಂಗಳೂರು : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನ ಹಲವೆಡೆ ಸಿಸಿಬಿ ದಾಳಿ ನಡೆಸಿ ಹಣ-ಆಸ್ತಿಪಾಸ್ತಿ ಜಪ್ತಿ ಮಾಡಿದೆ.

ಬೆಂಗಳೂರಿನ ನಾಲ್ಕು ಕಡೆ ಸಿಸಿಬಿ ದಾಳಿ ನಡೆಸಿದ್ದು, ನಗದು, ಹಣ ಹಾಗೂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದೆ. ಚಾಮರಾಜಪೇಟೆ, ಬಸವೇಶ್ವರನಗರ, ಸಿಟಿ ಮಾರ್ಕೆಟ್ , ಕಾಮಾಕ್ಷಿ ಪಾಳ್ಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಎಎಸ್ ಐ ಮಗಳಾದ ಶೀಲಾ ಎನ್ನುವವರ ಮನೆ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಜಗದೀಶ್ ಅಲಿಯಾಸ್ ಟಾಮಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶಕ್ ನೀಡಿದ್ದಾರೆ. ಮೀಡರ್ ಬಡ್ಡಿ ದಂಧೆ ನಡೆಸುತ್ತಿದ್ದ ಅವರ ಮೇಲೆ ಮನಿ ಲಾಂಡರಿಂಗ್ ಕಾಯಿದೆಯಡಿ ಕೇಸ್ ದಾಖಲಿಸಲಾಗಿದೆ.

ದಾಳಿ ವೇಳೆ 42 ಲಕ್ಷ ಹಣ, ಚಿನ್ನಾಭರಣ, ಪಾಸ್ ಪುಸ್ತಕ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...