ಗ್ರಾಹಕರಿಗೆ ಬಿಗ್ ಶಾಕ್ : `RBI’ ನಿಂದ ಕರ್ನಾಟಕದ ಈ ಬ್ಯಾಂಕ್ ಗಳ ಪರವಾನಗಿ ರದ್ದು!

ಬೆಂಗಳೂರು :  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)  ಮಹತ್ವದ ನಿರ್ಧಾರವನ್ನು ತೆಗೆದುಕೊದುಕೊಂಡಿದ್ದು, ಕರ್ನಾಟಕದ ಎರಡು ಸಹಕಾರಿ ಬ್ಯಾಂಕುಗಳ ಪರವಾನಗಿಯನ್ನು ರದ್ದು ಮಾಡಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಎರಡು ಬ್ಯಾಂಕುಗಳ ಪರವಾನಗಿಯನ್ನು ರದ್ದುಗೊಳಿಸಿದೆ. ಈ ಬ್ಯಾಂಕುಗಳು ಇನ್ನು ಮುಂದೆ ಕಾರ್ಯ ನಿರ್ವಹಿಸುವುದಿಲ್ಲ, ಇದು ಬ್ಯಾಂಕಿನಲ್ಲಿ ಖಾತೆ ಹೊಂದಿರುವವರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಬಹುದು.

ದೇಶದ ಕೇಂದ್ರ ಬ್ಯಾಂಕ್ ಆಗಿ ಮುಂದುವರೆದಿರುವ ಭಾರತೀಯ ರಿಸರ್ವ್ ಬ್ಯಾಂಕ್ (RBI) ಎರಡು ಸಹಕಾರಿ ಬ್ಯಾಂಕುಗಳ ಪರವಾನಗಿಗಳನ್ನು ರದ್ದುಗೊಳಿಸಿದೆ. ಶಾರದಾ ಮಹಿಳಾ ಸಹಕಾರಿ ಬ್ಯಾಂಕ್,  ಹರಿಹರೇಶ್ವರ ಸಹಕಾರಿ ಬ್ಯಾಂಕಿನ ಪರವಾನಗಿಯನ್ನು ಆರ್ ಬಿಐ  ರದ್ದುಗೊಳಿಸಿದೆ.

ಆರ್ ಬಿಐ ಪ್ರಕಾರ, ಬ್ಯಾಂಕುಗಳು ಸಾಕಷ್ಟು ಬಂಡವಾಳವನ್ನು ಹೊಂದಿಲ್ಲದ ಕಾರಣ ಅವುಗಳ ಪರವಾನಗಿಗಳನ್ನು ರದ್ದುಗೊಳಿಸಬೇಕಾಯಿತು. ಅವರು ಆದಾಯದ ಅಂದಾಜುಗಳನ್ನು ಹೊಂದಿಲ್ಲ ಎಂದು ಅದು ಹೇಳಿದೆ. ಜುಲೈ 11 ರಿಂದ ಹರಿಹರೇಶ್ವರ ಸಹಕಾರಿ ಬ್ಯಾಂಕಿನ ಬ್ಯಾಂಕಿಂಗ್ ವ್ಯವಹಾರವನ್ನು ಮುಚ್ಚಲಾಗಿದೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದಾಗ್ಯೂ, ಬ್ಯಾಂಕ್ ಖಾತೆದಾರರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಆರ್ಬಿಐ ಸ್ಪಷ್ಟಪಡಿಸಿದೆ. 99.96 ಠೇವಣಿದಾರರು ತಮ್ಮ ಹಣವನ್ನು ಮರಳಿ ಪಡೆಯಲಿದ್ದಾರೆ. ಹಣವನ್ನು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಅಡಿಯಲ್ಲಿ ಹಿಂದಿರುಗಿಸಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read