alex Certify BIG UPDATE : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿ ; ಕ್ಷಣ ಕ್ಷಣಕ್ಕೂ ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿ ; ಕ್ಷಣ ಕ್ಷಣಕ್ಕೂ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕೇರಳ : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿಯಾಗಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ.

ಚೂರಲ್ಮಾಲಾ ಮತ್ತು ಮುಂಡಕ್ಕೈನಲ್ಲಿ ಭೂಕುಸಿತ ಸಂಭವಿಸಿದ್ದು, ಕೇರಳದಲ್ಲಿ ಶೋಕಾಚರಣೆ ಮಾಡಲಾಗಿದ್ದು, ಸಾವಿನ ಸಂಖ್ಯೆ ಈಗ 330 ದಾಟಿದೆ. 220 ಕ್ಕೂ ಹೆಚ್ಚು ಜನರು ಕಾಣೆಯಾಗಿರುವುದರಿಂದ ಈ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ, ಸಂಜೆ 4 ಗಂಟೆಯವರೆಗೆ ಮುಂದುವರಿಯಬೇಕಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಗುರುವಾರ ಮೊಟಕುಗೊಳಿಸಲಾಯಿತು.

ಕೇರಳದಲ್ಲಿ ಭೂಕುಸಿತ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಜಿಲ್ಲಾಡಳಿತ ಮಾಹಿತಿ ನೀಡಿತ್ತು, ಈ ಹಿನ್ನೆಲೆ ಅವರು ನಿನ್ನೆ ಕೇರಳದ ವಯನಾಡಿಗೆ ಧಾವಿಸಿ ಅಲ್ಲಿನ ಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರು ಅಲ್ಲಿನ ಜನರಿಗೆ 100 ಕ್ಕೂ ಹೆಚ್ಚಿನ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...