alex Certify BIG UPDATE : ಕಲ್ಲುಕುರುಚಿ ಕಳ್ಳಭಟ್ಟಿ ದುರಂತ : ಸಾವಿನ ಸಂಖ್ಯೆ 63 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಕಲ್ಲುಕುರುಚಿ ಕಳ್ಳಭಟ್ಟಿ ದುರಂತ : ಸಾವಿನ ಸಂಖ್ಯೆ 63 ಕ್ಕೇರಿಕೆ

ಚೆನ್ನೈ: ತಮಿಳುನಾಡಿನ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ. ಘಟನೆ ಸಂಬಂಧ ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿದೆ.

ಅಕ್ರಮ ಮದ್ಯ ಸೇವಿಸಿ ಈ ದುರಂತ ಸಂಭವಿಸಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸುಮಾರು 200ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಇದೀಗ ಅವರಲ್ಲಿ 63 ಜನರು ಸಾವನ್ನಪ್ಪಿದ್ದಾರೆ. 200 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿ ಮಾರಣಾಂತಿಕ ಮೆಥನಾಲ್ ಇದೆ ಎಂಬುದು ಪರೀಕ್ಷೆ ವೇಳೆ ಪತ್ತೆಯಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...