alex Certify BREAKING : ‘ಬಿಗ್ ಬಾಸ್’ ಸ್ಪರ್ಧಿಗೆ ಬೇಲಾ…ಜೈಲಾ..? : ನಾಳೆ ವರ್ತೂರು ಸಂತೋಷ್ ಭವಿಷ್ಯ ನಿರ್ಧಾರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಬಿಗ್ ಬಾಸ್’ ಸ್ಪರ್ಧಿಗೆ ಬೇಲಾ…ಜೈಲಾ..? : ನಾಳೆ ವರ್ತೂರು ಸಂತೋಷ್ ಭವಿಷ್ಯ ನಿರ್ಧಾರ..!

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು, ನಾಳೆಗೆ ಆದೇಶ ಕಾಯ್ದಿರಿಸಲಾಗಿದೆ.

ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ಅವರು ಬೆಂಗಳೂರಿನ ಎಸಿಜೆಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಗೆ ಕಡತಗಳು ತಲುಪದ ಹಿನ್ನೆಲೆ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ಇಂದಿಗೆ ಮುಂದೂಡಿಕೆಯಾಗಿತ್ತು. ಇಂದು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಸಂತೋಷ್ ಗೆ ಬೇಲಾ..ಜೈಲಾ ಎಂಬುದನ್ನು ನಾಳೆ ಕೋರ್ಟ್ ಪ್ರಕಟಿಸಲಿದೆ.

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಲಾಕೆಟ್ ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇತಿಹಾಸದಲ್ಲೇ ಇದೇ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಬಿಗ್ ಬಾಸ್ ಮನೆಯಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಈ ಬಳಿಕ ರಾಜ್ಯದ ಹಲವು ಕಡೆ ಹುಲಿ ಉಗುರು ದಾಳಿ ನಡೆಯುತ್ತಿದೆ. ಹಲವು ನಟ, ಪ್ರಮುಖ ವ್ಯಕ್ತಿಗಳಿಗೆ ನೋಟಿಸ್ ನೀಡಿ ಶೋಧ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...