ಬೆಂಗಳೂರು : ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ (Writer Baragur Ramachandrappa) ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ರಾಜ್ಯ ಸರ್ಕಾರ (State Government) ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬರಗೂರು ರಾಮಚಂದ್ರ ನೇತೃತ್ವದಲ್ಲಿ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಗೊಂದಲವನ್ನು ನಿವಾರಿಸಿ ಮುಂದಿನ ತೀರ್ಮನ ಕೈಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕ ವಿತರಣೆ ಮಾಡಲಾಗಿದ್ದು, ಇದಕ್ಕೆ ಪರ್ಯಾಯವಾಗಿ ಏನು ಮಾಡಬಹುದು ಎಂದು ಸಭೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಸಾಹಿತಿ ಬರಗೂರು ರಾಮಚಂದ್ರ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳು ಭಾಗಿಯಾಗಿದ್ದರು