alex Certify BIGG NEWS : ಲೋಕಸಭೆ ಚುನಾವಣಾ ಕಣದಿಂದ 8 ಸಂಸದರು ಸ್ವಯಂ ನಿವೃತ್ತಿ : ಯತ್ನಾಳ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಲೋಕಸಭೆ ಚುನಾವಣಾ ಕಣದಿಂದ 8 ಸಂಸದರು ಸ್ವಯಂ ನಿವೃತ್ತಿ : ಯತ್ನಾಳ್ ಮಹತ್ವದ ಹೇಳಿಕೆ

ವಿಜಯಪುರ : ಮುಂದಿನ ಲೋಕಸಭೆ ಚುನಾವಣಾ ಕಣದಿಂದ 8 ಹಾಲಿ ಸಂಸದರು ಸ್ವಯಂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಉದಾಸಿ, ಡಿ.ವಿ. ಸದಾನಂದಗೌಡ ಸೇರಿದಂತೆ 8 ಮಂದಿ ಸಂಸದರು ಸ್ವಯಂ ಪ್ರೇರಣೆಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ 8 ಸಂಸದರು ಸ್ವಯಂ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...