alex Certify BIGG NEWS : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಮೈತ್ರಿ ಎಂದರೆ ಕಾರ್ಯಕರ್ತರ ಮಧ್ಯೆ ಸಾಮರಸ್ಯವಿರಬೇಕು. ಆದರೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಸಂಘರ್ಷವಿದೆ. ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಡದೇ ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ. ಇಂತಹ ಮೈತ್ರಿ ಸಾಮರಸ್ಯ ಆಗಲ್ಲ. ಇದು ಇನ್ನಷ್ಟು ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ತಿಳಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...