alex Certify BIGGBOSS-10 : ‘ಬಿಗ್ ಬಾಸ್’ ಫಿನಾಲೆಗೂ ಮುನ್ನ ಅಚ್ಚರಿಯ ಎಲಿಮಿನೇಷನ್ ; ಕಿಚ್ಚ ಸುದೀಪ್ ಸುಳಿವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGGBOSS-10 : ‘ಬಿಗ್ ಬಾಸ್’ ಫಿನಾಲೆಗೂ ಮುನ್ನ ಅಚ್ಚರಿಯ ಎಲಿಮಿನೇಷನ್ ; ಕಿಚ್ಚ ಸುದೀಪ್ ಸುಳಿವು

ಬೆಂಗಳೂರು : ಬಿಗ್ ಬಾಸ್ ಸೀಸನ್-10 ಅಂತಿಮ ಘಟ್ಟಕ್ಕೆ ತಲುಪಿದ್ದು, ಸಂಗೀತಾ ಶೃಂಗೇರಿ, ವಿನಯ್, ವರ್ತೂರು ಸಂತೋಷ್, ತುಕಾಲಿ ಸಂತು, ಕಾರ್ತಿಕ್, ಡ್ರೋನ್ ಪ್ರತಾಪ್ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಆರು ಮಂದಿ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಮನೆಯಿಂದ ಹೊರಕ್ಕೆ ಬರಲಿದ್ದಾರೆ.

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ ಎಂದು ಕಳೆದ ವಾರವಷ್ಟೇ ಕಿಚ್ಚ ಸುದೀಪ್ ಸುಳಿವು ನೀಡಿದ್ದರು.

ಈ ಆರು ಮಂದಿಯ ಪೈಕಿ ಯಾರಾದರೂ ಬಿಗ್ ಬಾಸ್ ಮನೆಯಿಂದ ಹೊರ ಹೋಗಬಹುದು. ಬಿಗ್ ಬಾಸ್ ವೀಕ್ಷಕರ ಅಂದಾಜಿನ ಪ್ರಕಾರ ತುಕಾಲಿ ಸಂತೋಷ್ ಮನೆಯಿಂದ ಹೊರಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಯಾವ ಸ್ಪರ್ಧಿ ಯಾವ ರೀತಿ ಹೊರಕ್ಕೆ ಹೋಗಲಿದ್ದಾರೆ ಎಂಬ ಸಂಗತಿ ಅಚ್ಚರಿ ತರಿಸಲಿದೆ ಎಂದು ಸುದೀಪ್ ಹೇಳಿದ್ದರು. ಈ ಹಿನ್ನೆಲೆ ತುಕಾಲಿ ಸಂತೋಷ್ ಮನೆಯಿಂದ ಹೊರಕ್ಕೆ ಬರಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...