alex Certify ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಕಾರ್; ಒಂದೇ ಕುಟುಂಬದ ಐವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಕಾರ್; ಒಂದೇ ಕುಟುಂಬದ ಐವರು ಸಾವು

ಬಿಹಾರದ ನವೀನ್‌ ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಮದುವೆಯ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಾರ್ಖಂಡ್‌ ನ ಪಲಮು ನಿವಾಸಿಗಳಾಗಿರುವ ಮೃತರು ಮದುವೆ ಪಾರ್ಟಿಗೆ ಹೋಗಿದ್ದರು. ಟೋಲ್ ಪಂಚಾಯತ್‌ ನ ಬಾಘಿ ಗ್ರಾಮದಿಂದ ಪಲಮು ಜಿಲ್ಲೆಯ ಛತ್ತರ್‌ ಪುರಕ್ಕೆ ಹಿಂತಿರುಗುತ್ತಿದ್ದಾಗ ಕಾರ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

7 ಜನರಿದ್ದ ಕಾರ್ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ರಂಜಿತ್ ಕುಮಾರ್, ಅಭಯ್ ಕುಮಾರ್, ಅಕ್ಷಯ್ ಕುಮಾರ್, ಶುಭಂ ಕುಮಾರ್ ಮತ್ತು ಬಬ್ಲು ಕುಮಾರ್ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಾದ ಗಂಜನ್ ಕುಮಾರ್ ಮತ್ತು ಮುಖೇಶ್ ಕುಮಾರ್ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ವಾರಣಾಸಿಗೆ ಕಳುಹಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಔರಂಗಬಾದ್ ಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...