alex Certify BREAKING NEWS: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ, 4 ಬೋಗಿ ಹಳಿತಪ್ಪಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ, 4 ಬೋಗಿ ಹಳಿತಪ್ಪಿ ಮೂವರ ಸಾವು

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ ಸಂಭವಿಸಿದೆ. ರೈಲು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಬಿಕಾನೇರ್ -ಗುವಾಹಟಿ ಎಕ್ಸ್ ಪ್ರೆಸ್ ರೈಲಿನ 4 ಬೋಗಿಗಳು ಹಳಿತಪ್ಪಿವೆ. ಪಾಟ್ನಾದಿಂದ ಗುವಾಹಟಿಗೆ ತೆರಳುತ್ತಿದ್ದ ರೈಲು ಪಶ್ಚಿಮಬಂಗಾಳದ ಡೋಮೋಹನಿ ಬಳಿ ಹಳಿತಪ್ಪಿದೆ. ರೈಲು ದುರಂತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಕೂಡಲೇ ರೈಲ್ವೇ ಪೊಲೀಸರು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಳಿತಪ್ಪಿದ ಬೋಗಿಗಳಲ್ಲಿ ಸಿಲುಕಿದವರನ್ನು ರಕ್ಷಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಕಾನೇರ್ -ಗುವಾಹಟಿ ಎಕ್ಸ್ ಪ್ರೆಸ್ ರೈಲಿನನ 4 ಬೋಗಿ ಹಳಿ ತಪ್ಪಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ 13 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈಲು ದುರಂತದ ಬಗ್ಗೆ ಮಾಹಿತಿ ತಿಳಿದ ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಸಿಎಂ ಮಮತಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...