
ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಬಳಿ ನಡೆದಿದೆ.
ಇಲ್ಲಿನ ಬಟ್ಟಕೋಡಿ ಬಳಿ ಈ ದುರಂತ ಸಂಭವಿಸಿದೆ. ಆತ್ಮಾನಂದ (27) ಹಾಗೂ ನವೀನ್ ಹೂಗಾರ್ (36) ಮೃತ ದುರ್ದೈವಿಗಳು. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು.
ಮಂಗಳೂರಿನ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.