alex Certify BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.

ದಶರಥ ರಾಮು ಪವಾರ (50) ಮೃತ ದುರ್ದೈವಿ. ದಶರಥ ರಾಮು ಅಥಣಿ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಚೇರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಥಣಿಯ ಬಸವೇಶ್ವರ ವೃತ್ತದಲ್ಲಿ ವೇಗವಾಗಿ ಬಂದ ಟಿಪ್ಪರ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಗ್ರಾಮ ಸಹಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಥಣಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...