
ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು-ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಹನುಮಂತರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಶೆಟ್ಟಿ ಅವರ ಚೇಂಬರ್ ನಲ್ಲಿ ದಾಖಲೆ ಪರಿಸೀಲನೆ ನಡೆಸಿದ್ದಾರೆ.
ಬಿಮ್ಸ್ ನಲ್ಲಿ ಔಷಧಿ ಖರೀದಿಯಲ್ಲಿ ಅವ್ಯವಹಾರ, ವೈದ್ಯರಿಂದ ಕರ್ತವ್ಯ ಲೋಪ ಆರೋಪ, ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.