alex Certify ಬಿರಿಯಾನಿಗಾಗಿ ಮುಗಿಬಿದ್ದ ಜನ, ಅಡುಗೆಯವರನ್ನು ಪಕ್ಕಕ್ಕೆ ತಳ್ಳಿ ತಾವೇ ಬಡಿಸಿಕೊಂಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರಿಯಾನಿಗಾಗಿ ಮುಗಿಬಿದ್ದ ಜನ, ಅಡುಗೆಯವರನ್ನು ಪಕ್ಕಕ್ಕೆ ತಳ್ಳಿ ತಾವೇ ಬಡಿಸಿಕೊಂಡರು

ಕೋಲಾರ: ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ನೂಕುನುಗ್ಗಲು ಉಂಟಾದ ಘಟನೆ ನಡೆದಿದೆ.

ಸಂಪಂಗಿ ಅವರ ಜನ್ಮದಿನ ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆಗೆ ಸಚಿವ ಮುನಿರತ್ನ ಉದ್ಘಾಟಿಸಬೇಕಿತ್ತು. ಆದರೆ, ಅವರು ತಡವಾಗಿ ಮಧ್ಯಾಹ್ನ 3 ಗಂಟೆಗೆ ಆಗಮಿಸಿದರು. ಇದರಿಂದಾಗಿ ಬಿರಿಯಾನಿ ವಿತರಣೆ ವಿಳಂಬವಾಗಿ ನಂತರ ಎಲ್ಲರೂ ಬಿರಿಯಾನಿ ಪಡೆದುಕೊಳ್ಳಲು ಮುಗಿಬಿದ್ದ ಕಾರಣ ನೂಕುನುಗ್ಗಲು ಉಂಟಾಗಿದೆ.

ಅಡುಗೆ ಬಡಿಸುತ್ತಿದ್ದವರನ್ನು ಪಕ್ಕಕ್ಕೆ ತಳ್ಳಿದ ಸಂಪಂಗಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ತಾವೇ ಬಡಿಸಿಕೊಂಡು ಊಟ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕ ಮಂಜುನಾಥಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...