alex Certify ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳುವುದಿಲ್ಲ. ಯಾರೇ ಭಾಗಿಯಾಗಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಬಿಟ್ ಕಾಯಿನ್ ಪ್ರಕರಣ ಪ್ರಧಾನಿಯವರ ಗಮನಕ್ಕೂ ಕೂಡ ಬಂದಿದೆ ಬಂದಿದೆ. ಖಂಡಿತವಾಗಿಯೂ ಇದು ಪ್ರಮುಖ ವಿಚಾರವಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಸುದ್ದಿಗಳೂ ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಮುಂದುವರೆಯುತ್ತಾರೆ ಎಂದು ಬಿ.ಎಸ್.ವೈ. ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...