alex Certify BJP ಮುಖಂಡನ ಹತ್ಯೆಗೆ ಯತ್ನ; PWD ಇಲಾಖೆಯ ಇಬ್ಬರು ಎಂಜಿನಿಯರ್ ಗಳು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BJP ಮುಖಂಡನ ಹತ್ಯೆಗೆ ಯತ್ನ; PWD ಇಲಾಖೆಯ ಇಬ್ಬರು ಎಂಜಿನಿಯರ್ ಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲಾ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್ ಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಬಿಜೆಪಿ ಮುಖಂಡ ಓಂಕಾರೇಶ್ವರ ಮೇಲೆ ಏಪ್ರಿಲ್ 12ರಂದು ಕಾರು ಹತ್ತಿಸಿ ಕೊಲ್ಲಲು ಯತ್ನಿಸಿದ ಆರೋಪದಡಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನ ಕೆ.ಆರ್. ವೃತ್ತದ ಪಿಡಬ್ಲುಡಿಯ ಪಿಆರ್ ಎಎಂಸಿ ವಿಭಾಗದ ಇಂಜಿನಿಯರ್ ಎಂ. ಅಶ್ವಿನಿ ಹಾಗೂ ತುಮಕೂರು ಲೋಕೋಪಯೋಗಿ ವೃತ್ತದ ಎಇ ಶಂಭುಕುಮಾರ್ ವಿರುದ್ಧ ದೂಋ ದಾಖಲಾಗಿತ್ತು. ಎಂ. ಅಶ್ವಿನಿಯನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದರು. ಇನ್ನೋರ್ವ ಆರೋಪಿ ಶಂಭುಕುಮಾರ್ ತಲೆಮರೆಸಿಕೊಂಡಿದ್ದಾರೆ.

ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ಪ್ರಕರಣ ಸಂಬಂಧ ಇದೀಗ ಇಬ್ಬರು ಇಂಜಿನಿಯರ್ ಗಳನ್ನು ಅಮಾನತುಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...