alex Certify ಈ ಕಾರಣಕ್ಕೆ ವೈರಲ್​ ಆಯ್ತು ಬಿಜೆಪಿ ಬೂತ್​ ಕಮಿಟಿ ಅಧ್ಯಕ್ಷರ ರಾಜೀನಾಮೆ ಪತ್ರ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಕಾರಣಕ್ಕೆ ವೈರಲ್​ ಆಯ್ತು ಬಿಜೆಪಿ ಬೂತ್​ ಕಮಿಟಿ ಅಧ್ಯಕ್ಷರ ರಾಜೀನಾಮೆ ಪತ್ರ….!

ಶಿವಮೊಗ್ಗ ಜಿಲ್ಲೆಯ ಬಿಜೆಪಿ ಬೂತ್​ ಕಮಿಟಿ ಅಧ್ಯಕ್ಷರ ರಾಜೀನಾಮೆ ಪತ್ರವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ರಾಜೀನಾಮೆ ನೀಡಲು ಈ ವ್ಯಕ್ತಿ ನೀಡಿರುವ ಕಾರಣವೇ ಈ ಪತ್ರ ಇಷ್ಟೊಂದು ವೈರಲ್​ ಆಗುವಂತೆ ಮಾಡಿದೆ.

ಶಿವಮೊಗ್ಗದ ಅಶೋಕ ನಗರದಲ್ಲಿ ಬಿಜೆಪಿ ಬೂತ್​ ಕಮಿಟಿ ಅಧ್ಯಕ್ಷರಾಗಿದ್ದ ಎಲ್​. ಶೇಖರ್​​​ ಆಗಸ್ಟ್​ 25ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಸಹ ಅಗತ್ಯ ವಸ್ತುಗಳ ಬೆಲೆ ಇಳಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಶಂಕರ್​ ರಾಜೀನಾಮೆ ಸಲ್ಲಿಸಿದ್ದಾರೆ.

ಜನರಿಗಾಗಿ ಕೆಲಸ ಮಾಡುವಲ್ಲಿ ಬಿಜೆಪಿಯು ವಿಫಲವಾಗಿದೆ. ಆಹಾರ ಧಾನ್ಯಗಳು, ಎಲ್​ಪಿಜಿ, ವಿದ್ಯುತ್, ಪೆಟ್ರೋಲ್​, ಡಿಸೇಲ್​ ಸೇರಿದಂತೆ ಬಹುತೇಕ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಜನರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ಶೇಖರ್​ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...