
ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ತೋರಿದ ಪ್ರಕರಣ ವಿರೋಧಿಸಿ ಆಗಸ್ಟ್ 26 ರಂದು ಕೊಡಗು ಚಲೋಗೆ ಕಾಂಗ್ರೆಸ್ ಕರೆ ನೀಡಿದೆ. ಇದೇ ವೇಳೆ ಬಿಜೆಪಿ ಸಮಾವೇಶ ಆಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಆ. 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ಸಮಾವೇಶಗಳಿಗೆ ಬ್ರೇಕ್ ಹಾಕಲಾಗಿದೆ. ಆಗಸ್ಟ್ 24 ರಂದು ಬೆಳಗ್ಗೆ 6 ಗಂಟೆಯಿಂದ 27 ರಂದು ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ. ಸತೀಶ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಸಮಾವೇಶಗಳಿಗೆ ಲಕ್ಷಾಂತರ ಮಂದಿ ಭಾಗವಹಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.