alex Certify ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ.

ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಕಣಕ್ಕಿಳಿಸಿದೆ.

ಕೈಸರ್‌ಗಂಜ್‌ನಲ್ಲಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಕೇಸರಿ ಪಕ್ಷವು ಟಿಕೆಟ್ ನಿರಾಕರಿಸಿದೆ.

ರಾಯ್ ಬರೇಲಿಯಲ್ಲಿ 2019 ರ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ದಿನೇಶ್ ಪ್ರತಾಪ್ ಸಿಂಗ್ ಅವರ ಮೇಲೆ ಬಿಜೆಪಿ ವಿಶ್ವಾಸವನ್ನು ಪುನರುಚ್ಚರಿಸಿದೆ. ಚುನಾವಣೆಯಲ್ಲಿ ಸೋತರೂ ಸೋಲಿನ ಅಂತರವನ್ನು ಗಣನೀಯವಾಗಿ ತಗ್ಗಿಸಿಕೊಂಡರು.

2019 ರ ಲೋಕಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ 5,34,918 ಮತಗಳನ್ನು ಮತ್ತು ಶೇಕಡಾ 55.80 ರಷ್ಟು ಮತಗಳನ್ನು ಪಡೆದರೆ, ದಿನೇಶ್ ಪ್ರತಾಪ್ ಸಿಂಗ್ 38.36 ಶೇಕಡಾ ಮತಗಳೊಂದಿಗೆ 3,67,740 ಮತಗಳನ್ನು ಗಳಿಸಿದ್ದರು. ಪಕ್ಷದ ಭದ್ರಕೋಟೆಯಲ್ಲಿ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 1,67,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಅಮೇಥಿ ಮತ್ತು ರಾಯ್ ಬರೇಲಿ ಸೇರಿದಂತೆ ಯುಪಿಯ ಎರಡು ಪ್ರಮುಖ ಸ್ಥಾನಗಳಿಗೆ ಬಿಜೆಪಿ ಈಗ ಅಭ್ಯರ್ಥಿಗಳನ್ನು ಘೋಷಿಸಿದೆ, ಆದರೆ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...