alex Certify ಪಡಿತರ ಚೀಟಿದಾರರಿಗೆ ಉಚಿತ ರೇಷನ್: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಉಚಿತ ರೇಷನ್: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಬಿಜೆಪಿ ಸರ್ಕಾರವು ರೈತ ವಿರೋಧಿ ಕೃಷಿ ಕಾನೂನನ್ನ ಶೀಘ್ರದಲ್ಲೇ ಹಿಂಪಡೆದುಕೊಳ್ಳಬೇಕು ಅಂತಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾನೂನನ್ನ ಹಿಂತೆಗೆದುಕೊಳ್ಳಬೇಕು ಇಲ್ಲವೇ ಸ್ಥಾನದಿಂದ ಕೆಳಗಿಳಿಯಬೇಕು ಅಂತಾ ಮಿಡ್ನಾಪೋರ್​ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳದ ಮೇಲೆ ಹಿಡಿತ ಸಾಧಿಸಲು ನಾನೆಂದಿಗೂ ಅವಕಾಶ ನೀಡಲಾರೆ. ಅಂತಹ ಯಾವುದೇ ಪ್ರಯತ್ನಕ್ಕೆ ರಾಜ್ಯದ ಜನತೆಯೂ ಬಿಜೆಪಿಗೆ ಸಾಥ್​ ನೀಡಬಾರದು ಅಂತಾ ಪಶ್ಚಿಮ ಬಂಗಾಳದ ಜನತೆಯಲ್ಲಿ ದೀದಿ ಮನವಿ ಮಾಡಿದ್ದಾರೆ.

ಮುಂಬರುವ ಚುನಾವಣೆ ಫಲಿತಾಂಶದ ಬಳಿಕವೂ ನಾನು ಸಿಎಂ ಆಗಿ ಮುಂದುವರಿದ್ರೆ ಸರ್ಕಾರ ಜನಕ್ಕೆ ಉಚಿತ ಪಡಿತರ ನೀಡಲಿದೆ. 294 ಸದಸ್ಯರುಳ್ಳ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುಂದಿನ ವರ್ಷ ಏಪ್ರಿಲ್​ – ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...