ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಕೊಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆರೋಪಗಳೆಲ್ಲ ಸತ್ಯ, ನಾವು ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. H D ಕುಮಾರಸ್ವಾಮಿ ಹಾಗೂ ನಾವು ಭವಿಷ್ಯದಲ್ಲಿ ಜೊತೆಯಾಗಿ ಹೋರಾಟ ಮಾಡುತ್ತೇವೆ , ಕುಮಾರಸ್ವಾಮಿ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ಕೆಲಸ ಆಗಬೇಕೆಂದರೆ ಸಿಎಂ ಕಚೇರಿಗೆ 30 ಲಕ್ಷ ರೂ. ನೀಡಬೇಕು ಎಂಬ ಆರೋಪವನ್ನು ಮಾಜಿ ಸಿಎಂ ಮಾಡಿದ್ದರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಕುಮಾರಸ್ವಾಮಿ ಆರೋಪಗಳೆಲ್ಲ ಸತ್ಯ ಎಂದು ಯಡಿಯೂರಪ್ಪ ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವುದನ್ನು ಬೆಂಬಲಿಸಿದರು.
ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಕಚೇರಿ ಲಂಚ ಸಂಗ್ರಹಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು, ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.