alex Certify ಬಿಜೆಪಿ-ಜೆಡಿಎಸ್ ನಾಯಕರು ಹನುಮಾನ್ ಧ್ವಜ ಗಲಾಟೆ ಷಡ್ಯಂತ್ರದ ರೂವಾರಿಗಳು-ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ-ಜೆಡಿಎಸ್ ನಾಯಕರು ಹನುಮಾನ್ ಧ್ವಜ ಗಲಾಟೆ ಷಡ್ಯಂತ್ರದ ರೂವಾರಿಗಳು-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮಂಡ್ಯ ಹನುಮಾನ್ ಧ್ವಜ ವಿವಾದದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ,ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. BJP/JDS ನಾಯಕರು ಈ ಷಡ್ಯಂತ್ರದ ರೂವಾರಿಗಳು. ಕೆರಗೋಡು ಗ್ರಾಮದಲ್ಲಿ ನಿರ್ಮಾಣವಾಗಿದ್ದ ಧ್ವಜ ಸ್ತಂಭದಲ್ಲಿ ಕರ್ನಾಟಕದ ಧ್ವಜ ಹಾಗೂ ರಾಷ್ಟ್ರಧ್ವಜ ಹಾರಾಟಕ್ಕೆ ಮಾತ್ರ ಅನುಮತಿಯಿದೆ. ಗ್ರಾಮ ಪಂಚಾಯತಿ ಸಭೆಯಲ್ಲೂ ಇದು ಪ್ರಸ್ತಾಪವಾಗಿದೆ. ಹೀಗಿದ್ದೂ ಧಾರ್ಮಿಕ ಧ್ವಜ ಹಾರಿಸುವ ಹಿಂದಿನ ಹುನ್ನಾರ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಒಂದು ಷಡ್ಯಂತ್ರವಷ್ಟೆ.

ಮಂಡ್ಯ ಜಿಲ್ಲೆ ಅತ್ಯಂತ ರಾಜಕೀಯ ಪ್ರಜ್ಞಾವಂತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೀರಾವರಿ, ನೆಲ-ಭಾಷೆಯ ವಿಚಾರದಲ್ಲಿ ಹೋರಾಟದ ನೆಲವಾಗಿದ್ದ ಮಂಡ್ಯ ಜಿಲ್ಲೆಯನ್ನು ಕೋಮು ದಳ್ಳುರಿಯ ನೆಲವನ್ನಾಗಿ ಪರಿವರ್ತಿಸಲು ಕೋಮುವಾದಿ ಪಕ್ಷ BJP ಪ್ರಯತ್ನಿಸುತ್ತಿದೆ. ಇಲ್ಲಿಯವರೆಗೂ ಜಾತ್ಯಾತೀತೆಯ ಲೇಬಲ್ ಅಂಟಿಸಿಕೊಂಡಿದ್ದ JDS ಕೂಡ BJP ಜೊತೆ ಸೇರಿ ಮಂಡ್ಯದ ವಾತಾವರಣ ಹಾಳುಮಾಡುತ್ತಿರುವುದು ವಿಪರ್ಯಾಸ. ಕೋಮು ಸಾಮರಸ್ಯಕ್ಕೆ ಹೆಸರಾಗಿದ್ದ ಮಂಡ್ಯದ ಜನತೆ BJP/JDS ಸಂಚನ್ನು ಅರಿಯಬೇಕು ಎಂದರು.

ಮಂಗಳೂರು, ಉಡುಪಿ,ಕಾರವಾರ ಸೇರಿದಂತೆ ಕರಾವಳಿ ಭಾಗಗಳನ್ನು ಈಗಾಗಲೇ ಕೋಮು ಪ್ರಯೋಗ ಶಾಲೆ ಮಾಡಿಕೊಂಡಿರುವ BJP, ಅಲ್ಲಿ ಅನೇಕ ಅಮಾಯಕರ ಹತ್ಯೆಗೆ ಕಾರಣವಾಗಿದೆ. ಇದೇ ರೀತಿ ಹಳೆ ಮೈಸೂರು ಭಾಗದ ಮಂಡ್ಯವನ್ನು ಕೋಮು ಪ್ರಯೋಗಶಾಲೆ ಮಾಡುವ ಸಂಚನ್ನು BJP ಹಾಕಿಕೊಂಡಿದೆ. ರಾಜಕೀಯ ನೆಲೆಗಾಗಿ ಧಾರ್ಮಿಕ ಭಾವನೆ ಕೆರಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವ BJP ಅದಕ್ಕಾಗಿ ಅಮಾಯಕರನ್ನು ಬಲಿ ಹಾಕುವ ಕೆಲಸವನ್ನು ಅವ್ಯಾಹತವಾಗಿ ಮಾಡಿಕೊಂಡು ಬಂದಿದೆ. BJPಯ ಈ ಸಂಚನ್ನು ಮಂಡ್ಯದ ಪ್ರಜ್ಞಾವಂತ ಜನತೆ ಅರ್ಥಮಾಡಕೊಳ್ಳುವರು ಎಂಬ ನಂಬಿಕೆಯಿದೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...