alex Certify ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ನಾಪತ್ತೆಯಾದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ನಾಪತ್ತೆಯಾದ ಯುವಕ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ನಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಿಜೆಪಿ‌ ಜೆಡಿಎಸ್ ನ ನಾಲ್ಕನೇ ದಿನದ ಪಾದಯಾತ್ರೆ ಮದ್ದೂರಿನ ನಿಡಘಟ್ಟದಿಂದ ಆರಂಭವಾಗಿದೆ. ಪಾದಯಾತ್ರೆ ನಡೆಯುತ್ತಿದ್ದ ವೇಳೆ ಚನ್ನಪಟ್ಟಣದ ಬಳಿ ದಾವಣಗೆರೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಯುವಕ ಕಾಣೆಯಾಗಿದ್ದಾನೆ.

18 ವರ್ಷದ ಮಹೇಶ್ ಕರಿಬಸಪ್ಪ ನಾಪತ್ತೆಯಾಗಿರುವ ಯುವಕ. ಯುವಕ ಮೂಗನಾಗಿದ್ದು ಪತ್ತೆಯಾದಲ್ಲಿ ಈ ಸಂಖ್ಯೆಗೆ ಸಂಪರ್ಕಿಸಿ: 9945587762 ಎಂದು ರಾಜ್ಯ ಬಿಜೆಪಿ ಘಟಕ ಮನವಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...