alex Certify BIG NEWS: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿಯ ಬರ್ಬರ ಹತ್ಯೆ

ಕಲಬುರ್ಗಿ: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿ ಓರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ.

ಮಲ್ಲಿಕಾರ್ಜುನ್ ಮುತ್ಯಾಲ (64) ಕೊಲೆಯಾದ ದುರ್ದೈವಿ. ಸೇಡಂ ನಿವಾಸಿಯಾಗಿರುವ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ, ಟಿವಿ ಶಾಪ್ ಗಳನ್ನು ನಡೆಸುತ್ತಿದ್ದರು. ನಿನ್ನೆ ಸೇಡಂ ನಲ್ಲಿ ನಡೆದಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿಯೂ ಭಾಗಿಯಾಗಿದ್ದರು. ಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಲು ತೀರ್ಮಾನಿಸಿದ್ದರು. ಆದರೆ ಸಮಯದ ಅಭಾವದಿಂದಾಗಿ ಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಾಧ್ಯವಾಗಿರಲಿಲ್ಲ.

ನಿನ್ನೆ ರಾತ್ರಿ ಅಂಗಡಿಗೆ ಬಂದು ಮಲಗಿದ್ದ ಮಲ್ಲಿಕಾರ್ಜುನ ಮುತ್ಯಾಲರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಎಷ್ಟೊತ್ತಾದರೂ ಮುತ್ಯಾಲ ಅವರು ಮನೆಗೆ ಬಾರದಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಅಂಗಡಿ ಬಳಿ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಮುತ್ಯಾಲ ಅವರ ಮರ್ಮಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.

ಮಲ್ಲಿಕಾರ್ಜುನ ಮುತ್ಯಾಲ ಈ ಹಿಂದೆ ಜೆಡಿಎಸ್ ಕಾರ್ಯಕರ್ತರಾಗಿದ್ದರು. ಸ್ಥಳಕ್ಕೆ ಬಿಜೆಪಿ ಮುಖಂಡರು, ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...