alex Certify ಕುತೂಹಲ ಮೂಡಿಸಿದ ಬಿಜೆಪಿ ಬೆಳವಣಿಗೆ, ಇಂದಿನಿಂದ ಅರುಣ್ ಸಿಂಗ್ ಸರಣಿ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲ ಮೂಡಿಸಿದ ಬಿಜೆಪಿ ಬೆಳವಣಿಗೆ, ಇಂದಿನಿಂದ ಅರುಣ್ ಸಿಂಗ್ ಸರಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ಹೊತ್ತಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಮೂರು ದಿನಗಳ ಕಾಲ ಶಾಸಕರು, ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಅವರ ಸಭೆಯ ಬಗ್ಗೆ ಭಾರೀ ಕುತೂಹಲ ಮೂಡಿದೆ. ಪ್ರತಿಯೊಬ್ಬ ಶಾಸಕರಿಗೂ ಪ್ರತ್ಯೇಕ ಭೇಟಿಗೆ ಸಮಯ ನಿಗದಿ ಮಾಡಲಾಗಿದ್ದು, ಗುಂಪುಗುಂಪಾಗಿ ಶಾಸಕರು ಭೇಟಿಯಾಗುವಂತಿಲ್ಲ. ಗುಂಪು ಗುಂಪಾಗಿ ಸಭೆ ನಡೆಸುವಂತಿಲ್ಲ. ಅರುಣ್ ಸಿಂಗ್ ಅವರ ಬಳಿ ಮಾತನಾಡಿದ್ದನ್ನು ಮಾಧ್ಯಮಗಳಿಗೆ ತಿಳಿಸುವಂತಿಲ್ಲ ಎಂದು ಹೈಕಮಾಂಡ್ ನಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಶಾಸಕರು ಗುಂಪಾಗಿ ಭೇಟಿ ಮಾಡುವುದನ್ನು, ಸಭೆ ನಡೆಸುವುದನ್ನು ಸಹಿಸುವುದಿಲ್ಲ ಎಂದು ಹೈಕಮಾಂಡ್ ತಾಕೀತು ಮಾಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಅರುಣ್ ಸಿಂಗ್ ಜೊತೆಗಿನ ಸಭೆ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ಸಭೆಯ ಬಳಿಕ ತೆರೆ ಬೀಳಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...